ನಾಮ ಹಲವು, ಸತ್ಯ ಒಂದೇ ಎನ್ನುವ ಮಾತು ಸವಯವ ಕೃಷಿ, ಸುಸ್ಥಿರ ಕೃಷಿ, ನೈಸರ್ಗಿಕ ಕೃಷಿ ಹೀಗೆ ಹತ್ತು ಹಲವಾರು ಪದಗಳಿಂದ ಕರೆಯುವ ಬೇಸಾಯ ಪದ್ಧತಿಗೂ ಅನ್ವಯಿಸುತ್ತದೆ. ಸಾವಯವ ಕೃಷಿ ಆನಾದಿ ಕಾಲದಿಂದಲೂ ರೂಡಿಯಲ್ಲಿದ್ದರು ಪ್ರಸ್ತುತ ಸಂದರ್ಭದಲ್ಲಿ ಹಲವಾರು ಮಾರ್ಪಾಡುಗಳನ್ನು ಅಳವಡಿಸಿಕೊಂಡಿದೆ.
ಅತಿಯಾದ ಗೊಬ್ಬರ ಹಾಗೂ ಕೀಟನಾಶಕಗಳ ಬಳಕೆಯಿಂದ ನೈಸರ್ಗಿಕ ಸಂಪನ್ಮೂಲಗಳಾದ ಮಣ್ಣು, ನೀರು ವಾತಾವರಣ, ಸಸ್ಯ ಮತ್ತು ಪ್ರಾಣಿಸಂಕುಲಗಳು ಮಲಿನಗೊಳ್ಳುವುದರ ಜೊತೆಗೆ ಭೂಮಿಯ ಭೌತಿಕ, ರಾಸಾಯನಿಕ ಹಾಗೂ ಜೈವಿಕ ಗುಣಧರ್ಮಗಳು ಕ್ಷೀಣಿಸುವುದಲ್ಲದೆ ಮಣ್ಣಿನ ಫಲವತ್ತತೆ ಮತ್ತು ಉತ್ಪಾದಕತೆ ಕುಂಠಿತಗೊಂಡಿದೆ. ರಾಸಾಯನಿಕ ವಸ್ತುಗಳ ಬಳಕೆಯಿಂದ ಬರಡಾಗುತ್ತಿರುವ ಭೂಮಿಗೆ ಚೈತನ್ಯ ತುಂಬಲು ಸಾವಯವ ಕೃಷಿ ಪದ್ಧತಿ ಅಗತ್ಯ ಮತ್ತು ಅನಿವಾರ್ಯ.
ಸಾವಯವ ಕೃಷಿ ಒಂದು ಸಮಗ್ರ ಬೆಳೆ ಉತ್ಪದನಾ, ನಿರ್ವಾಹಣಾ ಪದ್ಧತಿಯಾಗಿದ್ದು, ಸ್ಥಳೀಯವಾಗಿ ಲಭ್ಯವಿರುವ ನೈಸರ್ಗಿಕ ಸಂಪನ್ಮೂಲಗಳನ್ನು ಬಳಸಿ, ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಂಡು ಪರಿಸರ ಸ್ನೇಹಿ ಜೈವಿಕ ವಿಧಾನಗಳನ್ನು ಬಳಸಿ ಗುಣಮಟ್ಟದ ಆಹಾರ ಉತ್ಪಾದನೆ ಮಾಡುವ ಕ್ರಮಕ್ಕೆ ಸುಸ್ಥಿರ ಬೇಸಾಯ ಪದ್ಧತಿ ಎನ್ನಬಹುದಾಗಿದೆ.
ಮೂಲ :
ದೂರ ಶಿಕ್ಷಣ ಘಟಕ
ವಿಸ್ತರಣಾ ನಿರ್ದೇಶನಾಲಯ, ಹೆಬ್ಬಾಳ
ಕೃಷಿ ವಿಶ್ವವಿದ್ಯಾನಿಲಯ, ಜಿ.ಕೆ.ವಿ.ಕೆ. ಬೆಂಗಳೂರು.
ಕೊನೆಯ ಮಾರ್ಪಾಟು : 12/14/2019
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕುದೂರಿನ ಬಳಿಯ ಬೆಟ್ಟಹಳ್ಳ...