অসমীয়া   বাংলা   बोड़ो   डोगरी   ગુજરાતી   ಕನ್ನಡ   كأشُر   कोंकणी   संथाली   মনিপুরি   नेपाली   ଓରିୟା   ਪੰਜਾਬੀ   संस्कृत   தமிழ்  తెలుగు   ردو

ರಾಜ್ಯ ಕೃಷಿ ಇಲಾಖೆ

ರಾಜ್ಯ ಕೃಷಿ ಇಲಾಖೆ

ಕೃಷಿ ಇಲಾಖೆಯು ರಾಜ್ಯದ ಪ್ರಮುಖ ಅಭಿವೃದ್ದಿ ಇಲಾಖೆಗಳಲ್ಲಿ ಒಂದಾಗಿದ್ದು, ರೈತರ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡು ವಿವಿಧ ಮೂಲಗಳಿಂದ ಹೊರಹೊಮ್ಮುವ ಸಂಶೋಧನಾ ಫಲಿತಾಂಶಗಳನ್ನು ಆಧುನಿಕ ತಂತ್ರಜ್ಞಾನವನ್ನು ಮಳೆ ಹಾಗೂ ನೀರಾವರಿ ಆಶ್ರಯದ ಸುಮಾರು ಒಟ್ಟು ೧೨೪ ಲಕ್ಷ ಹೆಕ್ಟೇರು ಗಳಲ್ಲಿ  ಸಾಗುವಳಿ ಮಾಡುತ್ತಿರುವ ೭೮.೩೨ ಲಕ್ಷ   ರೈತ ಕುಟುಂಬಗಳಿಗೆ ಪರಿಣಾಮಕಾರಿಯಾಗಿ ವರ್ಗಾಯಿಸುವ ಮೂಲಕ ಇವರುಗಳು ತಮ್ಮ ಹಿಡುವಳಿಗಳಲ್ಲಿ ಆಧುನಿಕ ತಂತ್ರಜ್ಞಾನ  ಬಳಸಿ ಹೆಚ್ಚು ಇಳುವರಿ ಪಡೆಯಲು ನೆರವು ನೀಡುತ್ತಿದೆ. ರಾಜ್ಯದ ಒಟ್ಟಾರೆ ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಕೃಷಿ ಇಲಾಖೆಯು

ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯಗತಗೊಳಿಸುತ್ತಿದೆ. ಈ ನಿಟ್ಟಿನಲ್ಲಿ ೨೦೧೪-೧೫ ನೇ ಸಾಲಿನಲ್ಲಿ ಕೃಷಿ ಭಾಗ್ಯ, ಕೆ .ಕಿಸಾನ್, ರಾಷ್ಟ್ರೀಯ ಇ ಆಡಳಿತ, ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ರೈತ ಸಂಪರ್ಕ ಕೇಂದ್ರಗಳಲ್ಲಿ ಕೃಷಿ ಪರಿಕರಗಳ ನಿರ್ವಹಣೆ, ಕೃಷಿ ಯಂತ್ರೋಪಕರಣಗಳ ಬಾಡಿಗೆ ಆಧಾರಿತ ಸೇವಾ ಕೇಂದ್ರ,  ಭೂಚೇತನ-ಪ್ಲಸ್ ಮುಂತಾದ  ಹೊಸ ಕಾರ್ಯಕ್ರಮಗಳೊಂದಿಗೆ  ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಭೂ ಚೇತನ, ಸ್ವಬಿಜಾಭಿವ್ರುದ್ದಿ  ಯೋಜನೆ, ಮುಂತಾದ ವಿಶಿಷ್ಟ ಕಾರ್ಯಕ್ರಮಗಳ ಅನುಷ್ಠಾನದಿಂದ ಹಾಗೂ ಕೃಷಿ ಪರಿಕರಗಳಾದ ಬಿತ್ತನೆ ಬೀಜ, ಲಘು ಪೋಷಕಾಂಶ,  ಜೈವಿಕ ಗೊಬ್ಬರ ಮತ್ತು ಸಸ್ಯ ಸಂರಕ್ಷಣಾ ಔಷದಿಗಳ ಸಕಾಲಿಕ ಸರಬರಾಜಿನಿಂದಾಗಿ ೨೦೧೪-೧೫ ರಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಬರಗಾಲ ಪರಿಸ್ಥಿತಿ

ಇದ್ದರೂ ಸಹ ೧೩೦ ಲಕ್ಷ ಟನ್ ಆಹಾರ  ಧಾನ್ಯ ಉತ್ಪಾದನೆ ನಿರೀಕ್ಷಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ: ಭಾಗ 1

ಭಾಗ 2

ಮೂಲ : ರೈತ ಮಿತ್ರ

ಕೊನೆಯ ಮಾರ್ಪಾಟು : 6/27/2020



© C–DAC.All content appearing on the vikaspedia portal is through collaborative effort of vikaspedia and its partners.We encourage you to use and share the content in a respectful and fair manner. Please leave all source links intact and adhere to applicable copyright and intellectual property guidelines and laws.
English to Hindi Transliterate