" ಆರೋಗ್ಯವೇ ಭಾಗ್ಯ" ಇದು ನಮ್ಮೆಲ್ಲರ ಆಶಯ. ಈ ಆಶಯ ಈಡೇರಬೇಕಾದರೆ ಪೌಷ್ಟಿಕ ಆಹಾರ, ಶುದ್ದ ಕುಡಿಯುವ ನೀರು, ಗಾಳಿ, ಪರಿಸರ, ನಮಗೆ ಲಭ್ಯವಿರಬೇಕು. ಅನಾರೋಗ್ಯ ಉಂಟಾದಾಗ ನಮ್ಮ ಆರೋಗ್ಯ ರಕ್ಷಣೆಗಾಗಿ ಚಿಕಿತ್ಸೆ ನೀಡುವ ಸಿಬ್ಬಂದಿ , ಆಸ್ಪತ್ರೆ, ಪ್ರಯೋಗಾಲಯ ಮುಂತಾದುವುಗಳನ್ನು ನಮ್ಮ ಹಿರಿಯರು ಕಾಲ ಕಾಲಕ್ಕೆ ರೂಪಿಸಿಕೊಳ್ಳುತ್ತಲೇ ಬಂದಿದ್ದಾರೆ. ಈ ರೆಇಯಲ್ಲಿ ಮನುಷ್ಯನ ಆರೋಗ್ಯ ರಕ್ಷಣೆಗಾಗಿ ನಮ್ಮ ಸಮಾಜವೂ ರೂಪಿಸಲ್ಪಟ್ಟಿರುವ ಒಟ್ಟು ವ್ಯವಸ್ಥೆಗೆ "ಆರೋಗ್ಯ ವ್ಯವಸ್ಥೆ" ಎಂದು ಹೇಳಬಹುದು.
ಮೇಲೆ ಹೇಳಿದಂತೆ ಆಸ್ಪತ್ರೆ, ವೈದ್ಯರು ಹಾಗೂ ಔಷಧಿಗಳು ಆರೋಗ್ಯ ವವಸ್ಥೆಯ ಒಂದು ಮುಖ್ಯ ಭಾಗವಾಗಿವೆಯೇ ಹೊರತು, ಅವೇ ಸಂಪೂರ್ಣ ವ್ಯವಸ್ಥೆ ಅಲ್ಲ. ಅವುಗಳನ್ನು ನಾವು "ಆರೋಗ್ಯ ಸೇವೆಗಳು" ಎಂದು ಕರೆಯುತ್ತೇವೆ. ಆರೋಗ್ಯ ಸೇವೆಗಳು, ಮನೆ ಮದ್ದಾಗಿರಬಹುದು ಅಥವಾ ವ್ಯವಸ್ಥಿತ ಆರೋಗ್ಯ ಪದ್ದತಿಗಳಾದ ಆಯುರ್ವೇದ, ಹೋಮಿಯೋಪತಿ, ಯುನಾನಿ, ಯೋಗ, ಅಲೋಪತಿ, ವ್ಯವಸ್ಥೆಗಳಿರಬಹುದು.
ಆರೋಗ್ಯ ಸೇವೆಗಳು ಸಮುದಾಯಕ್ಕೆ ಹಳ್ಳಿಯಲ್ಲಿ ನಾಟಿ ಔಷಧಿ ಮೂಲಕ, ಖಾಸಗಿ ಆಸ್ಪತ್ರೆ ಹಾಗೂ ಸರಕಾರದ ಆರೋಗ್ಯ ಕೇಂದ್ರಗಳ ಮೂಲಕ ದೊರೆಯುತ್ತಿವೆ. ಆರೋಗ್ಯ ಸೇವೆಗಳನ್ನು ಎಲ್ಲರಿಗೂ ಉಚಿತವಾಗಿ ಅಥವಾ ಅತ್ಯಂತ ಕಡಿಮೆ ಖರ್ಚಿನಲ್ಲಿ ಪಡೆದುಕೊಳ್ಳಲು ಸರಕಾರ ಸ್ಥಾಪಿಸಿರುವ ವ್ಯವಸ್ಥೆಯನ್ನು ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎನ್ನಬಹುದು.
ಇಲ್ಲ. ಆರೋಗ್ಯ ವ್ಯವಸ್ಥೆಯ ಎಲ್ಲಾ ಖರ್ಚು ವೆಚ್ಚವನ್ನು ಸರ್ಕಾರವು ನಾವು ಕೊಡುವ ವಿವಿಧ ರೀತಿಯ ತೆರಿಗೆಗಳಿಂದ ಭರಿಸುತ್ತಿದೆ. ನಮ್ಮ ಊರಿನಲ್ಲಿ ಬದವರಿರಲಿ, ಶ್ರೀಮಂತರಿರಲಿ, ತಮ್ಮ ದೈನಂದಿನ ಬದುಕಲ್ಲಿ ವಿವಿಧ ರೀತಿಯಲ್ಲಿ ತೆರಿಗೆ ಕಟ್ಟುತ್ತಿದ್ದಾರೆ.ಇದು ಸಾಮಾನುಗಳನ್ನು ಖರೀದಿಸುವಾಗ ಹಣದ ರೂಪದಲ್ಲಿರಬಹುದು. (ಉದಾಹರಣೆಗೆ ಸೋಪು, ಸಕ್ಕರೆ, ಉಪ್ಪು, ಖರೀದಿಸುವಾಗ ಹಾಗೂ ಮನೆ ಪಟ್ಟಿ, ಕುಡಿಯುವ ನೀರು, ಜಮೀನು ಕರ ನೀಡಿದಾಗ) ಮತ್ತು ದೇಶದ ಉನ್ನತಿಗಾಗಿ ದುಡಿತದ ರೂಪದಲ್ಲಿರಬಹುದು. (ಉದಾಹರಣೆಗೆ ಕೂಲಿ, ಹೊಲ ಉಳುಮೆ, ನೌಕರಿ). ಹೀಗೆ ನಮ್ಮಿಂದ ತೆರಿಗೆ ರೂಪದಲ್ಲಿ ಪಡೆದ ಹಣದ ಒಂದು ಭಾಗವನ್ನು ಸರಕಾರ ಆರೋಗ್ಯ ಸೇವೆಗಳನ್ನು ಒದಗಿಸಲು ಖರ್ಚು ಮಾದುತಿದೆ. ಹಾಗಾಗಿ ಸಾರ್ವಜನಿಕ ಆರೋಗ್ಯ ವ್ಯವಸ್ಹೆಯು ಮೇಲ್ನೋಟಕ್ಕೆ ಉಚ್ತವಾಗಿ ಕಂಡರೂ, ನಿಜ ರೂಪದಲ್ಲಿ ಅದರ ಖರ್ಚನ್ನು ಎಲ್ಲಾ ಸಾರ್ವಜನಿಕರು ಭರಿಸುತ್ತಿದ್ದಾರೆ.
ಇಲ್ಲ. ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ವ್ಯಾಪ್ತಿ ಇನ್ನೂ ವಿಶಾಲವಾಗಿದೆ. ರೋಗಿಗಳಿಗೆ ಚಿಕಿತ್ಸೆ ನೀಡುವುದು ಅದರ ಹಲವಾರು ಕೆಲಸಗಳಲ್ಲಿ ಒಂದು ಕೆಲಸ. ಇದಲ್ಲದೆ ಖಾಯಿಲೆ ಬರದ ಹಾಗೆ ತಡೆಗಟ್ಟಲು ಆರೋಗ್ಯ ಶಿಕ್ಷಣ, ಗರ್ಭಿಣಿಯರಿಗೆ ಮಾಹಿತಿ, ಅಂಗನವಾಡಿ ಕೇಂದ್ರದ ಮೇಲ್ವಿಚಾರಣೆ ಮಾಡುವ ಕೆಲಸ ಮಾಡುತ್ತಿದೆ. ಪುನರ್ವಸತಿಗಾಗಿ ಪೂರಕ ಸೇವೆಗಳಾದ ಅಂಗವಿಕಲರಿಗೆ ಗುಣಾತ್ಮಕ ಜೀವನ ನಡೆಸಲು ಹಾಗೂ ಪುನರ್ವಸತಿ ಕಲ್ಪಿಸಲು ಪೂರಕ ಕೆಲಸಗಳನ್ನೂ ಕೂಡ ನಿರ್ವಹಿಸುತ್ತಿದೆ.
ಮೇಲ ತಿಳಿಸಿದ ಆರೋಗ್ಯ ಸೇವೆಗಳು ವ್ಯವಸ್ಥಿತವಾಗಿ ಪ್ರತಿಯೊಬ್ಬರಿಗೂ ತಲುಪಿಸಲು ಸರಕಾರವು ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಸ್ಥಾಪಿಸಿದೆ. ಇದರ ಅಡಿಯಲ್ಲಿ ಸರಕಾರವು ಹಲವು ಮಟ್ಟದಲ್ಲಿ ಆರೋಗ್ಯ ಸೇವೆಗಳ ವ್ಯವಸ್ಥೆ ಮಾಡಿದೆ. ಉದಾ: ಉಪಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಜಿಲ್ಲಾ ಆಸ್ಪತ್ರೆ, ರಾಷ್ರೀಯ ಆರೋಗ್ಯ ಕಾರ್ಯಕ್ರಮಗಳು, ಇತ್ಯಾದಿ.
ನಮ್ಮ ಆರೋಗ್ಯ ಚೆನ್ನಾಗಿರಬೇಕಾದರೆ, ನಮ್ಮ ಊರಿನ ಒಟ್ಟು ಆರೋಗ್ಯ ವ್ಯವಸ್ಥೆ ಉತ್ತಮವಾಗಿರಬೇಕು. ಅದಕ್ಕಾಗಿ ಸರಕಾರ, ಅಸ್ಮುದಾಯ ಆರೋಗ್ಯ ಸೇವೆಗಳನ್ನು ಜಾರಿಗೊಳಿಸಿದೆ. ಆದರೆ ಇದು ಕೇವಲ ಸರಕಾರದ ಕೆಲಸ ಎಂದು ನಾವು ಕೈ ಕಟ್ಟಿ ಕುಳಿತುಕೊಳ್ಳುವಂತಿಲ್ಲ. ಎರಡು ಕೈ ಸೇರದೆ ಚಪ್ಪಾಳೆಯಾಗದು. ಅದೇ ರೀತಿ ಗ್ರಾಮಸ್ಥರ ಸಹಕಾರವಿಲ್ಲದೆ ಆರೋಗ್ಯ ಸೇವೆಗಳಲ್ಲಿ ಹೆಚ್ಚಿನ ಯಶಸ್ಸು ನಿರೀಕ್ಷಿಸಲಾಗದು. ನಮ್ಮ ಗ್ರಾಮದ ಅಗತ್ಯತೆಗಳಿಗೆ ಪೂರಕವಾಗಿ ಕ್ರಿಯಾ ಯೋಜನೆ ತಯಾರಿಸಲು ಮತ್ತು ಅದರ ಸಮರ್ಪಕ ಅನುಷ್ಠಾನದ ಬಗ್ಗೆ ನಿಗಾ ವಹಿಸಲು, ನಮ್ಮ ಗ್ರಾಮದ ಆರೋಗ್ಯ ಸಿಬ್ಬಂದಿ ಯೊಡನೆ ಹೆಗಲಿಗೆ ಹೆಗಲು ಕೊಟ್ಟು ನಾವು ಸಹಕರಿಸಬೇಕಾಗುತ್ತದೆ. ಕೆಲವೊಮ್ಮೆ ಯೋಜನೆ ಚೆನ್ನಾಗಿ ತಯಾರಿಸಲಾಗುತ್ತದೆ, ಆದರೆ ಸರಿಯಾದ ರೀತಿ ಜಾರಿಗೊಳಿಸಲಾಗಿರುವುದಿಲ್ಲ. ಆದ್ದರಿಂದ ಇದರ ಸಾಧಕ ಬಾಧಕಗಳ ಉಸ್ತುವಾರಿಯಲ್ಲಿಯೂ ನಾವು ಸಕ್ರಿಯ ಪಾತ್ರವಹಿಸಬೇಕು. ಇದರಿಂದ ನಮ್ಮ ಗ್ರಾಮ ಮತ್ತು ಗ್ರಾಮದ ಆರೋಗ್ಯ ವ್ಯವಸ್ಥೆ ಬಗ್ಗೆ ಸರಿಯಾದ ಮಾಹಿತಿ ದೊರಕಿ ತಪ್ಪು ಕಲ್ಪನೆಗಳು ಕಡಿಮೆಯಾಗಲು ದಾರಿಯಾಗುತ್ತದೆ. ಹಾಗೂ ಉತ್ತಮ ಆರೋಗ್ಯ ಸೇವೆಗಳು ದೊರಕು ದಾರಿಯಾಗುತ್ತದೆ.
ನಮ್ಮೂರಿನ ಆರೋಗ್ಯ ವ್ಯವಸ್ಥೆ ನಮ್ಮೂರಿನ ಸ್ವತ್ತು. ಇಲ್ಲಿ ನಡೆಯುವ ಎಲ್ಲಾ ಆಗು ಹೋಗುಗಳ ಬಗ್ಗೆ ತಿಳಿಯುವ ಹಕ್ಕು ಗ್ರಾಮದ ಎಲ್ಲಾ ಜನರಿಗಿದೆ. ಇದು ಕೇವಲ ನಮ್ಮ ಹಕ್ಕಷ್ಟೇ ಅಲ್ಲ, ನಮ್ಮ ಜವಾಬ್ದಾರಿಯೂ ಹೌದು. ಆರೋಗ್ಯ ವ್ಯವಸ್ಥೆಯ ಸಿಬ್ಬಂದಿಗಳು ತಮ್ಮ ಮೇಲಧಿಕಾರಿಗಳಿಗೆ ತಮ್ಮ ಕಾರ್ಯ ಚಟುವಟಿಕೆಗಳ ಬಗ್ಗೆ ಹೇಗೆ ಮಾಹಿತಯನ್ನು ತಿಳಿಸುತ್ತಾರೋ ಹಾಗೆಯೇ ಗ್ರಾಮಸ್ಥರಿಗೂ ತಿಳಿಸುವ ಹೊಣೆಗಾರಿಕೆ ಅವರಿಗೆ ಇದೆ. ಉದಾಹರಣೆಗೆ ನಮ್ಮೂರಿನ ಉಪ ಕೇಂದ್ರದ ನಿರ್ವಹಣೆಗೆ ಎಷ್ಟು ಹಣ ಬಂದಿದೆ? ಅದರಲ್ಲಿ ಎಷ್ಟು ಯಾವುದಕ್ಕೆ ಖರ್ಚಾಗಿದೆ? ಅಥವಾ ಔಷಧಿಗಳು ಯಾಕೆ ಈ ದಿನ ಕಡಿಮೆ ಪ್ರಮಾಣದಲ್ಲಿ ನೀಡುತ್ತಿದ್ದಾರೆ? ಹೀಗೆ ಬೇರೆ, ಬೇರೆ ಸೇವೆಗಳ ಬಗ್ಗೆ ಮಾಹಿತಿಯನ್ನು ಕೇಳಿದಾಗ ಆರೋಗ್ಯ ವ್ಯವಸ್ಥೆಯ ಸಿಬ್ಬಂದಿಗಳು ನೀವ್ ಕೇಳಿದ ಮಾಹಿತಿಯನ್ನು ಕೊಡಲು ನಿರಾಕರಿಸುವಂತಿಲ್ಲ, ನಮಗೆ ಮಾಹಿತಿಯನ್ನು ನೀಡುವ ಗುರುತರ ಹೊಣೆಗಾರಿಕೆ ಅವರಿಗೆ ಇದೆ, ಇದು ಅವರ ಕರ್ತವ್ಯವೂ ಹೌದು. ಅದೂ ಅಲ್ಲದೆ ಪ್ರತಿಯೊಂದು ಸಾರ್ವಜನಿಕ ವ್ಯವಸ್ಥೆಯಲ್ಲಿನ ಮಾಹಿತಿಯನ್ನು ಪಡೆಯುವುದು ನಮ್ಮ ಹಕ್ಕಾಗಿದೆ. ಯಾರಾದರೂ ನೀವು ಕೇಳಿದ ಮಾಹಿತಿಯನ್ನು ಕೊಡದೆ ಇದ್ದಲ್ಲಿ ಮಾಹಿತಿ ಹಕ್ಕು ಕಾಯಿದೆ (೨೦೦೫) ಪ್ರಕಾರ ಅರ್ಜಿ ಹಾಕಿ ಪಡೆದುಕೊಳ್ಳಬಹುದು.
ಖಂಡಿತಾ ಇದೆ. ಕೆಲವೊಂದು ಮಾಹಿತಿಯನ್ನು ನಾವು ಕೇಳದೆಯೇ ಆರೋಗ್ಯ ವ್ಯವಸ್ಥೆಯ ಸಿಬ್ಬಂದಿಗಳು ಕಡ್ಡಾಯವಾಗಿ ಜನ ಸಾಮಾನ್ಯರ ಗಮನಕ್ಕೆ ತರಬೇಕು. ಅವುಗಳೆಂದರೆ
ನಾಗರಿಕ ಸನ್ನದು ಎಂದರೆ ಸರ್ಕಾರವು ಗ್ರಾಮದ ಜನರಿಗೆ ನೀಡುವ ಭರವಸೆ ಅಥವಾ ಪ್ರಮಾಣ ವಚನ. ಇದನ್ನು ಯೋಜನಾ ವಿಭಾಗ ಮಾತು ಆರೋಗ್ಯ ಮಾತು ಕುಟುಂಬ ಕಲ್ಯಾಣ ನಿರ್ದೇಶನಾಲಯ, ಬೆಂಗಳೂರು ಇವರಿಂದ ತಯಾರಿಸಲ್ಪಟ್ಟಿದೆ. ೨೦೦೨ ರಲ್ಲಿ ಕರ್ನಾಟಕದ ಎಲ್ಲಾ ಜಿಲ್ಲೆಯ ಜಿಲ್ಲಾ ಆರೋಗ್ಯ ಅಧಿಕಾರಿ (ಡಿ.ಎಚ್.ಓ ) ಗಳಿಗೆ ಕಳುಹಿಸಲಾಗಿದ್ದು, ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ನಾಗರೀಕರ ಸನ್ನದನ್ನು ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಪ್ರದರ್ಶಿಸಬೇಕೆಂದು ಆರೋಗ್ಯ ಇಲಾಖೆಯು ಆದೇಶ ನೀಡಲಾಗಿದೆ. ಅದರ ನಮೂನೆಯನ್ನು ಕೆಳಗೆ ನೀಡಲಾಗಿದೆ.
ಮೂಲ:ಗ್ರಾಮ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿ ಹಾಗೂ ಇತರೆ ಸಮಿತಿಗಳ ಕೈಪಿಡಿ.
ಕೊನೆಯ ಮಾರ್ಪಾಟು : 4/26/2020