<div id="MiddleColumn_internal"> <p style="text-align: justify; ">ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯು ರಾಜ್ಯ ಸರ್ಕಾರಿ ನೌಕರರಿಗಾಗಿ ಉಚಿತ ಚಿಕಿತ್ಸೆಯನ್ನು ನೀಡಲು ಜ್ಯೋತಿ ಸಂಜೀವಿ ಎಂಬ ಯೋಜನೆಯನ್ನು ಜಾರಿಗೆ ತಂದಿದೆ.</p> <p style="text-align: justify; ">ಈ ಯೋಜನೆಯು ಒಳಗೊಳ್ಳುವ ಖಾಯಿಲೆಗಳ ವಿವರಗಳು</p> <p style="text-align: justify; ">ಈ ಯೋಜನೆಯಡಿಯಲ್ಲಿ ೭ ತರಹದ ಗಂಭೀರ ಖಾಯಿಲೆಗಳಿಗೆ ಉಚಿತವಾಗಿ ಚಿಕಿತ್ಸೆಯನ್ನು ನೀಡಲಾಗುತ್ತದೆ.</p> <p style="text-align: justify; ">ಆ ೭ ಗಂಭೀರ ಖಾಯಿಲೆಗಳೆಂದರೆ</p> <ul style="text-align: justify; "> <li>ಹೃದ್ರೋಗ</li> <li>ನರರೋಗ</li> <li>ಕ್ಯಾನ್ಸರ್</li> <li>ನವಜಾತ ಶಿಶು & ಚಿಕ್ಕ ಮಕ್ಕಳ ಚಿಕಿತ್ಸೆ</li> <li>ಅಪಘಾತ( ಮರ ಅಥವಾ ಮನೆ ಮೇಲಿಂದ ಬಿದ್ದು ಮೂಳೆ ಮುರಿತಗೊಂಡಾಗ)</li> <li>ಸುಟ್ಟ ಗಾಯ</li> <li>ಮೂತ್ರ ಪಿಂಡದ ಸಮಸ್ಯೆ( ಮೂತ್ರ ಪಿಂಡದ ಕಲ್ಲಿನ ಶಸ್ತ್ರ ಚಿಕಿತ್ಸೆ)</li> </ul> <p style="text-align: justify; ">ಈ ೭ ಖಾಯಿಲೆಗಳಿಗೆ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳು,ಮತ್ತು ಯೋಜನೆಗೆ ನೋಂದಾವಣೆಗೊಂಡ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ (ಖಾಸಗೀ ಆಸ್ಪತ್ರೆ/ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ) ಉಚಿತವಾಗಿ ಚಿಕಿತ್ಸೆ ನೀಡಲಾಗುವುದು.</p> <p style="text-align: justify; ">ಒಟ್ಟಾರೆಯಾಗಿ ೭ ಖಾಯಿಲೆಗಳ ೫೭೨ಕ್ಕೂ ಹೆಚ್ಚು ವಿವಿದ ಬಗೆಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲಾಗುವುದು.</p> <p style="text-align: justify; ">ಅರ್ಹತೆ:- ೧)ರಾಜ್ಯ ಸರ್ಕಾರಿ ನೌಕರರಾಗಿರಬೇಕು ೨) ಹೆಚ್ ಆರ್ ಎಂ ಎಸ್ ನಲ್ಲಿ ನೌಕರರ ಹಾಗೂ ಅವರ ಕುಟುಂಬದ ಅವಲಂಬಿತರ ಆಧಾರ್ ಸಂಖ್ಯೆಯನ್ನು ನಮೂದಿಸಿರುವುದು ಕಡ್ಡಾಯ ೩) ನೌಕರರ ಕೆ ಜಿ ಐ ಡಿ ಸಂಖ್ಯೆ ಕಡ್ಡಾಯ</p> <p style="text-align: justify; ">ಹೆಚ್ಚಿನ ಮಾಹಿತಿಗಾಗಿ:- ೧೮೦೦೪೨೫೮೩೩೦ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡುವುದು ಹಾಗೂ ಸಮೀಪದ ತಾಲ್ಲೂಕು ಆಸ್ಪತ್ರೆ/ಸಮುದಾಯ ಆರೋಗ್ಯ ಕೇಂದ್ರ/ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಆರೋಗ್ಯ ಮಿತ್ರರನ್ನು ಭೇಟಿ ಮಾಡುವುದು</p> </div>