অসমীয়া   বাংলা   बोड़ो   डोगरी   ગુજરાતી   ಕನ್ನಡ   كأشُر   कोंकणी   संथाली   মনিপুরি   नेपाली   ଓରିୟା   ਪੰਜਾਬੀ   संस्कृत   தமிழ்  తెలుగు   ردو

ವಸತಿ ಶಾಲೆ

ವಸತಿ ಶಾಲೆ

  1. ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು:-
    • 6ನೇ ತರಗತಿಯಿಂದ 10ನೇ ತರಗತಿಯ ವರೆಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿನಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳನ್ನು ತೆರೆಯಲಾಗಿವೆ.
    • 6ನೇ ತರಗತಿಯಿಂದ 10ನೇ ತರಗತಿಯ ವರೆಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ತೆರೆಯಲಾಗಿವೆ.
    • ಅರ್ಹತೆ:- ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.
    • ವಿಧಾನ:- ನಿಗಧಿತ ಅರ್ಜಿಯನ್ನು ಭರ್ತಿ ಮಾಡಿ, ವಿದ್ಯಾ ಸಂಸ್ಥೆಯ ಮುಖ್ಯಸ್ಥರ ಮೂಲಕ ಸಂಬಂದಿಸಿದ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಮಂಜೂರಾತಿಗಾಗಿ ಕಳುಹಿಸುವುದು.
    • ದಾಖಲೆಗಳು:- ವಿದ್ಯಾ ಸಂಸ್ಥೆಯ ಮುಖ್ಯಸ್ಥರು ದೃಢೀಕರಿಸಿದ ಅದ್ಯಯನದ ಪ್ರವಾಸದ ವಿವರಗಳನ್ನು ಲಗತ್ತಿಸುವುದು.
  2. ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಶಾಲೆಗಳು:-
    • ಮೆಟ್ರಿಕ್ ನಂತರ ಶಿಕ್ಷಣ ಮುಂದುವರೆಸಲು ಅನುಕೂಲವಾಗುವಂತೆ ಕಿತ್ತೂರು ರಾಣಿ ಚೆನ್ನಮ್ಮ ಪದವಿ ಪೂರ್ವ ವಸತಿ ಕಾಲೇಜುಗಳನ್ನು ತೆರೆಯಲಾಗಿವೆ.
    • ಮೆಟ್ರಿಕ್ ನಂತರ ಶಿಕ್ಷಣ ಮುಂದುವರೆಸಲು ಅನುಕೂಲವಾಗುವಂತೆ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜುಗಳನ್ನು ತೆರೆಯಲಾಗಿವೆ.
    • ಅರ್ಹತೆ:- ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.
    • ವಿಧಾನ:- ನಿಗಧಿತ ಅರ್ಜಿಯನ್ನು ಭರ್ತಿ ಮಾಡಿ, ವಿದ್ಯಾ ಸಂಸ್ಥೆಯ ಮುಖ್ಯಸ್ಥರ ಮೂಲಕ ಸಂಬಂದಿಸಿದ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಮಂಜೂರಾತಿಗಾಗಿ ಕಳುಹಿಸುವುದು.
    • ದಾಖಲೆಗಳು:- ವಿದ್ಯಾ ಸಂಸ್ಥೆಯ ಮುಖ್ಯಸ್ಥರು ದೃಢೀಕರಿಸಿದ ಅದ್ಯಯನದ ಪ್ರವಾಸದ ವಿವರಗಳನ್ನು ಲಗತ್ತಿಸುವುದು.
  3. ಮೈಸೂರಿನ ರಾಮಕೃಷ್ಣ ಆಶ್ರಮ, ಜೆ.ಎಸ್.ಎಸ್. ಮತ್ತು ಚನ್ನೇನಹಳ್ಳಿಯ ಜನಸೇವಾ ವಿದ್ಯಾ ಕೇಂದ್ರಗಳಲ್ಲಿ 5ನೇ ತರಗತಿಯಿಂದ ಪ್ರವೇಶಾವಕಾಶವಿರುತ್ತದೆ. :-
    • ವಿದ್ಯಾರ್ಥಿಯೂ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಕುಟುಂಬದ ವಾರ್ಷಿಕ ವರಮಾನ ರೂ.2.50 ಲಕ್ಷ ಮೀರಿರಬಾರದು.
    • ಹಿಂದಿನ ತರಗತಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಪ್ರತಿ ವರ್ಷ ಏಪ್ರಿಲ್ ಮಾಹೆಯಲ್ಲಿ ನಡೆಸುವ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
    • ಸದರಿ ಸಂಸ್ಥೆಗಳ ಎಲ್ಲಾ ಶಾಲಾ ಶುಲ್ಕ ಮತ್ತು ನಿರ್ವಹಣಾ ವೆಚ್ಚವನ್ನು ಸಮಾಜ ಕಲ್ಯಾಣ ಇಲಾಖೆ ಭರಿಸುವುದು.
    • ಮಾಹಿತಿಗಾಗಿ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳನ್ನು ಸಂಪರ್ಕಿಸುವುದು.
  4. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ:-
    • 5 ರಿಂದ 10ನೇ ತರಗತಿಯವರೆಗೆ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳ ಊಟ ಮತ್ತು ವಸತಿ ಸೌಲಭ್ಯ ಒದಗಿಸಲು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳನ್ನು ತೆರೆಯಲಾಗಿವೆ.
    • 5ನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳು ಮುಖ್ಯೋಪಾದ್ಯಾಯರ ಮೂಲಕ ಅರ್ಜಿಯನ್ನು ಜೂನ್-15ರೊಳಗೆ ಸಂಬಂದಿಸಿದ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳಿಗೆ ಕಳುಹಿಸಬೇಕು.
    • ನಿಲಯಗಳಲ್ಲಿ ಪ್ರವೇಶ ಪಡೆದು ಉತ್ತೀರ್ಣರಾಗುವ ವಿದ್ಯಾರ್ಥಿಗಳನ್ನು ನಿಲಯ ವಾಸಿಗಳಾಗಿ ಮುಂದುವರೆಸಲಾಗುವುದು.
    • ಹೊಸದಾಗಿ ವಸತಿ ನಿಲಯಗಳಿಗೆ ಸೇರಲು ಬಯಸುವ 6 ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬೇಕು.
    • ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ವಿಶೇಷ ಭೋದನೆ ನೀಡಲಾಗುವುದು (ವಿಜ್ಞಾನ, ಗಣಿತ, ಇಂಗ್ಲೀಷ್ ಮತ್ತು ಸಮಾಜ).
  5. ಕಾಲೇಜು ವಿದ್ಯಾರ್ಥಿ ನಿಲಯಗಳು:-
    • ಪಿ.ಯು.ಸಿ ಮತ್ತು ಪದವಿ ತರಗತಿಗಳಿಗೆ ಸೇರಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಊಟ ಮತ್ತು ವಸತಿ ಸೌಲಭ್ಯ ಒದಗಿಸಲು ಪಿ.ಯು.ಸಿ ಮತ್ತು ಪದವಿ ವಿದ್ಯಾರ್ಥಿ ನಿಲಯಗಳನ್ನು ತೆರೆಯಲಾಗಿವೆ.
    • ಪಿ.ಯು.ಸಿ ತರಗÀತಿಗೆ ದಾಖಲಾದ ವಿದ್ಯಾರ್ಥಿಗಳು ಪ್ರಾಂಶುಪಾಲರ ಮೂಲಕ ಅರ್ಜಿಯನ್ನು ಜೂನ್-15ರೊಳಗೆ ಸಂಬಂದಿಸಿದ ತಾಲ್ಲೂಕು/ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಕಳುಹಿಸಬೇಕು.
    • ನಿಲಯಗಳಲ್ಲಿ ಪ್ರವೇಶ ಪಡೆದು ಉತ್ತೀರ್ಣರಾಗುವ ವಿದ್ಯಾರ್ಥಿಗಳನ್ನು ನಿಲಯ ವಾಸಿಗಳಾಗಿ ಮುಂದುವರೆಸಲಾಗುವುದು.
    • ಹೊಸದಾಗಿ ವಸತಿ ನಿಲಯಗಳಿಗೆ ಸೇರಲು ಬಯಸುವ ವಿದ್ಯಾರ್ಥಿಗಳು ಅರ್ಜಿಗಳನ್ನು ಪ್ರಾಂಶುಪಾಲರ ಮೂಲಕ  ಸಲ್ಲಿಸಬೇಕು.
  6. ವಿದ್ಯಾರ್ಜನೆಗಾಗಿ ಪ್ರೋತ್ಸಾಹ ಧನ:-
    • ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪಿ.ಯು.ಸಿ ಮತ್ತು ಪದವಿ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾವಕಾಶ ಸಿಗದೇ ಇದ್ದಲ್ಲಿ, ಪ್ರತಿ ಮಾಹೆಗೆ ರೂ.1500/- ರಂತೆ 10 ತಿಂಗಳುಗಳಿಗೆ ಪ್ರೋತ್ಸಾಹ ಧನ ನೀಡುವ ಯೋಜನೆ ಇರುತ್ತದೆ.  ಅಂತಹ ವಿದ್ಯಾರ್ಥಿಗಳು ಪ್ರಾಂಶುಪಾಲರ ಮೂಲಕ ಸಮಾಜ ಕಲ್ಯಾಣಾಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು.

ಮೂಲ : ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ

ಕೊನೆಯ ಮಾರ್ಪಾಟು : 7/3/2020



© C–DAC.All content appearing on the vikaspedia portal is through collaborative effort of vikaspedia and its partners.We encourage you to use and share the content in a respectful and fair manner. Please leave all source links intact and adhere to applicable copyright and intellectual property guidelines and laws.
English to Hindi Transliterate