অসমীয়া   বাংলা   बोड़ो   डोगरी   ગુજરાતી   ಕನ್ನಡ   كأشُر   कोंकणी   संथाली   মনিপুরি   नेपाली   ଓରିୟା   ਪੰਜਾਬੀ   संस्कृत   தமிழ்  తెలుగు   ردو

ಕಾಡು ಮೃಗಗಳಿಂದ ಜಾನುವಾರು ಸಾವಿಗೆ

ಕಾಡು ಮೃಗಗಳಿಂದ ಜಾನುವಾರು ಸಾವಿಗೆ

  1. ಕಾಡು ಮೃಗಗಳ ಕಾರಣದಿಂದ ಸಾಕು ಪ್ರಾಣಿಗಳು ಮೃತಪಟ್ಟಲ್ಲಿ ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರ ನೀಡುವ ಬಗ್ಗೆ ಇರುವ ಸರ್ಕಾರಿ ಆದೇಶ ಯಾವುದು?
  2. ಸರ್ಕಾರಿ ಆದೇಶ ಸಂಖ್ಯೆ ಎಫ್ಇಇ 143 ಎಫ್ಡಬ್ಲ್ಯೂಎಲ್ 2010 ದಿನಾಂಕ 03-08-2011ರ ಸರ್ಕಾರಿ ಆದೇಶವನ್ನು ಡೌನ್ಲೋಡ್ ಮಾಡಿಕೊಳ್ಳಿ.

  3. ಕಾಡು ಮೃಗಗಳ ಕಾರಣದಿಂದ ಸಾಕು ಪ್ರಾಣಿಗಳು ಮೃತಪಟ್ಟಲ್ಲಿ ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರ ಪಡೆಯಲು ಯಾರು ಅರ್ಹರು?
  4. ಪ್ರತಿಪಾದಕನ ಸಾಕು ಪ್ರಾಣಿಗಳು ಕೊಲ್ಲಲ್ಪಡುವುದಕ್ಕೆ ಪರಿಹಾರ ಮಂಜೂರು ಮಾಡುವ ಪ್ರದೇಶಗಳನ್ನು ಹೊರತುಪಡಿಸಿ ವನ್ಯಜೀವಿಗಳು ಮೇಯುವ ಪ್ರದೇಶಗಳನ್ನು ನಿಷೇಧಿಸಲಾಗಿದೆ. 

    ಸ್ಪಷ್ಟನೆ: ಕಾಡು ಮೃಗ ಎಂಬುದು ಯಾವುದನ್ನು ಒಳಗೊಂಡಿರುತ್ತದೆ ಎಂಬುದನ್ನು ವನ್ಯಜೀವಿ (ರಕ್ಷಣೆ) ಕಾಯಿದೆ, 1972ರ ಸೆಕ್ಷನ್ 2 (36)ರಲ್ಲಿ ಹೇಳಿರುವ ವಿವರಣೆಗೆ ಅನುಗುಣವಾಗಿ ಅರ್ಥೈಸಿಕೊಳ್ಳಬೇಕು. ಈ ವಿವರಣೆಯ ಪ್ರಕಾರ ‘ಕಾಡು ಮೃಗ’ ಎಂದರೆ ಷೆಡ್ಯೂಲ್ I ರಿಂದ Iಗಿ ರಲ್ಲಿ ನಿರ್ದಿಷ್ಟಪಡಿಸಿರುವ ಹಾಗೂ ಸ್ವಭಾವದಲ್ಲಿ ಕ್ರೂರವಾದುದೆಂದು ಕಂಡುಬರುವ ಯಾವುದೇ ಪ್ರಾಣಿ.

  5. ಸಾಕು ಪ್ರಾಣಿಯ ಸಾವಿನ ಪ್ರಕರಣದಲ್ಲಿ ಎಷ್ಟು ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರ ನೀಡಲಾಗುತ್ತದೆ?
  6. ಸಾಕು ಪ್ರಾಣಿಯ ಸಾವಿನ ಪ್ರಕರಣದಲ್ಲಿ 2,500/- ರಿಂದ 3,000/- ರೂಪಾಯಿಗಳ ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರ ನೀಡಲಾಗುತ್ತದೆ.

  7. ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರ ಪ್ರತಿಪಾದಿಸಲು ಅರ್ಜಿ ಸಲ್ಲಿಸಲು ಯಾವುದಾದರೂ ನಿಗದಿತ ನಮೂನೆ ಇದೆಯೇ?
  8. ಇಲ್ಲ. ಅರ್ಜಿ ಸಲ್ಲಿಸಲು ಯಾವುದೇ ನಿಗದಿತ ನಮೂನು ಇರುವುದಿಲ್ಲ. ಆದಾಗ್ಯೂ, ಕಾನೂನುಬದ್ಧ ವಾರಸುದಾರನ ಸಹಿ ಅಥವಾ ಎಡಗೈ ಹೆಬ್ಬೆಟ್ಟಿನ ಗುರುತನ್ನು ಹೊಂದಿರುವ ಅರ್ಜಿಯನ್ನು ಓದಲು ಸಾಧ್ಯವಾಗುವಂತೆ ಖಾಲಿ ಕಾಗದದ ಮೇಲೆ ಸ್ಪಷ್ಟವಾಗಿ ಬರೆದಿರಬೇಕು ಅಥವಾ ಬೆರಳಚ್ಚು ಮಾಡಿರಬೇಕು.

  9. ಅರ್ಜಿಯ ಜೊತೆ ಯಾವ ಯಾವ ದಾಖಲಾತಿಗಳನ್ನು ಲಗತ್ತಿಸಬೇಕು?
  10. ಕಾಡು ಪ್ರಾಣಿಯ ದಾಳಿಯ ಕಾರಣದಿಂದ ಸಾಕು ಪ್ರಾಣಿಗಳು ಸಾವಿಗೀಡಾದ ಪ್ರಕರಣದಲ್ಲಿ ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರ ಪಡೆಯಲು ಅರ್ಜಿಯ ಜೊತೆ ಲಗತ್ತಿಸಬೇಕಾದ ದಾಖಲಾತಿಗಳೆಂದರೆ :

    ಕಾಡು ಮೃಗದ ದಾಳಿಯಿಂದ ಸಾಕುಪ್ರಾಣಿಯು ಸಾವಿಗೀಡಾಗಿದೆ ಎಂಬುದನ್ನು ಪ್ರಮಾಣೀಕರಿಸುವ ಮರಣೋತ್ತರ ಪರೀಕ್ಷಾ ವರದಿ. ಕಾನೂನುಬದ್ಧ ವಾರಸುದಾರನ ಪ್ರಮಾಣಪತ್ರ. ಪ್ರಕರಣದ ಪೆÇಲೀಸ್ ತನಿಖಾ ವರದಿ.

  11. ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರ ಪ್ರತಿಪಾದಿಸಲು ಯಾರಿಗೆ ಅರ್ಜಿ ಸಲ್ಲಿಸಬೇಕು?
  12. ಅರ್ಜಿಯನ್ನು ಸಂಬಂಧಪಟ್ಟ ವಲಯ ಅರಣ್ಯಾಧಿಕಾರಿಗೆ ಸಲ್ಲಿಸಬೇಕು.

  13. ಸಾಕುಪ್ರಾಣಿಯ ಸಾವಿನ ಪ್ರಕರಣದಲ್ಲಿ ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರ ಮಂಜೂರು ಮಾಡಲು ಯಾರಿಗೆ ಅಧಿಕಾರ ನೀಡಲಾಗಿದೆ?
  14. ಕಾಡು ಮೃಗದ ದಾಳಿಯಿಂದ ಮೃತಪಟ್ಟಿರುವ ವ್ಯಕ್ತಿಯ ಕಾನೂನುಬದ್ಧ ವಾರಸುದಾರನಿಗೆ ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರ ಸೌಲಭ್ಯವನ್ನು ಮಂಜೂರು ಮಾಡಲು ಸಂಬಂಧಪಟ್ಟ ಉಪ ಅರಣ್ಯ ಸಂರಕ್ಷಣಾಧಿಕಾರಿಳು ಮತ್ತು ಮೇಲ್ಕಂಡ ಸಂಬಂಧಪಟ್ಟ ವ್ಯಾಪ್ತಿ ಪ್ರದೇಶದ ಕರ್ನಾಟಕ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

  15. ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರ ನೀಡುವಲ್ಲಿ ವಿಳಂಬವೇಕೆ?
  16. ಕೆಲವು ಸಂದರ್ಭಗಳಲ್ಲಿ ಆ ಉದ್ದೇಶಕ್ಕಾಗಿ ಸಾಕಷ್ಟು ನಿಧಿಯ ಅಲಭ್ಯತೆಯ ಕಾರಣದಿಂದಾಗಿ ವಿಳಂಬವಾಗುತ್ತದೆ. ಕೆಲವು ಸಂದರ್ಭಗಳಲ್ಲಿ ಅಗತ್ಯ ದಾಖಲಾತಿಗಳಾದ ಮರಣೋತ್ತರ ಪರೀಕ್ಷಾ ವರದಿ, ಪೆÇಲೀಸ್ ವರದಿ ಅಥವಾ ಕಾನೂನುಬದ್ಧ ವಾರಸುದಾರರ ಪ್ರಮಾಣಪತ್ರ ಪಡೆಯುವಲ್ಲಿ ಆಗುವ ವಿಳಂಬದಿಂದ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತದೆ.

    ಮೂಲ : ಅರಣ್ಯ ಇಲಾಖೆ

ಕೊನೆಯ ಮಾರ್ಪಾಟು : 1/28/2020



© C–DAC.All content appearing on the vikaspedia portal is through collaborative effort of vikaspedia and its partners.We encourage you to use and share the content in a respectful and fair manner. Please leave all source links intact and adhere to applicable copyright and intellectual property guidelines and laws.
English to Hindi Transliterate