অসমীয়া   বাংলা   बोड़ो   डोगरी   ગુજરાતી   ಕನ್ನಡ   كأشُر   कोंकणी   संथाली   মনিপুরি   नेपाली   ଓରିୟା   ਪੰਜਾਬੀ   संस्कृत   தமிழ்  తెలుగు   ردو

ಕಾಡು ಮೃಗಗಳಿಂದ ಶಾಶ್ವತ ವಿಕಲತೆ ಉಂಟಾದುದಕ್ಕೆ

ಕಾಡು ಮೃಗಗಳಿಂದ ಶಾಶ್ವತ ವಿಕಲತೆ ಉಂಟಾದುದಕ್ಕೆ

  1. ಕಾಡು ಮೃಗಗಳಿಂದ ಮನುಷ್ಯನ ಸಾವು ಸಂಭವಿಸಿದಲ್ಲಿ ಕೃಪಾಧನ (ಎಕ್ಸ್-ಗ್ರೇಷಿಯಾ) ನೀಡುವ ಬಗ್ಗೆ ಇರುವ ಸರ್ಕಾರಿ ಆದೇಶ ಯಾವುದು
  2. ಸರ್ಕಾರಿ ಆದೇಶ ಸಂಖ್ಯೆ ಎಫ್ಇಇ 259 ಎಫ್ಡಬ್ಲ್ಯೂಎಲ್ 2006 ದಿನಾಂಕ 17-01-2007ರ ಸರ್ಕಾರಿ ಆದೇಶವನ್ನು ಡೌನ್ಲೋಡ್ ಮಾಡಿಕೊಳ್ಳಿ.

  3. ಕಾಡು ಮೃಗಗಳಿಂದ ಮನುಷ್ಯನ ಸಾವು ಸಂಭವಿಸಿದ ಪ್ರಕರಣದಲ್ಲಿ ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರ ಪಡೆಯಲು ಯಾರು ಅರ್ಹರಾಗಿರುತ್ತಾರೆ
  4. ದಾಳಿಯ ಸಂದರ್ಭದಲ್ಲಿ ಆತನು ಅರಣ್ಯ ಪ್ರದೇಶದಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿಲ್ಲದೇ ಇದ್ದಲ್ಲಿ ಕಾಡು ಮೃಗದ ದಾಳಿಯಿಂದ ಶಾಶ್ವತ ವಿಕಲತೆ ಹೊಂದುವ ಯಾವುದೇ ವ್ಯಕ್ತಿಯು ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರ ಪಡೆಯಲು ಪ್ರತಿಪಾದಿಸಬಹುದು. 

    ಸ್ಪಷ್ಟನೆ : ಕಾಡು ಮೃಗ ಎಂಬುದು ಯಾವುದನ್ನು ಒಳಗೊಂಡಿರುತ್ತದೆ ಎಂಬುದನ್ನು ವನ್ಯಜೀವಿ (ರಕ್ಷಣೆ) ಕಾಯಿದೆ, 1972ರ ಸೆಕ್ಷನ್ 2 (36)ರಲ್ಲಿ ಹೇಳಿರುವ ವಿವರಣೆಗೆ ಅನುಗುಣವಾಗಿ ಅರ್ಥೈಸಿಕೊಳ್ಳಬೇಕು. ಈ ವಿವರಣೆಯ ಪ್ರಕಾರ ‘ಕಾಡು ಮೃಗ’ ಎಂದರೆ ಷೆಡ್ಯೂಲ್ I ರಿಂದ Iಗಿ ರಲ್ಲಿ ನಿರ್ದಿಷ್ಟಪಡಿಸಿರುವ ಹಾಗೂ ಸ್ವಭಾವದಲ್ಲಿ ಕ್ರೂರವಾದುದೆಂದು ಕಂಡುಬರುವ ಯಾವುದೇ ಪ್ರಾಣಿ.

  5. ಶಾಶ್ವತ ವಿಕಲತೆಯ ಪ್ರಕರಣದಲ್ಲಿ ಎಷ್ಟು ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರ ನೀಡಲಾಗುತ್ತದೆ
  6. ಶಾಶ್ವತ ವಿಕಲತೆಯ ಪ್ರಕರಣದಲ್ಲಿ 35,000 ರೂಪಾಯಿಗಳ ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರ ನೀಡಲಾಗುತ್ತದೆ.

  7. ಶಾಶ್ವತ ವಿಕಲತೆಯ ಪ್ರಕರಣದಲ್ಲಿ ವೈದ್ಯಕೀಯ ವೆಚ್ಚಗಳ ಮರುಪಾವತಿ ಪ್ರತಿಪಾದನೆಗೆ ಅವಕಾಶವಿದೆಯೇ/li>

    ಹೌದು. ಶಾಶ್ವತ ವಿಕಲತೆಯ ಪ್ರಕರಣದಲ್ಲಿ ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರದ ಜೊತೆಗೆ ವೈದ್ಯಕೀಯ ವೆಚ್ಚಗಳನ್ನೂ ಸಹ ಪ್ರತಿಪಾದಿಸಬಹುದು.

  8. ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರ ಪ್ರತಿಪಾದಿಸಲು ಅರ್ಜಿ ಸಲ್ಲಿಸಲು ಯಾವುದಾದರೂ ನಿಗದಿತ ನಮೂನೆ ಇದೆಯೇ
  9. ಇಲ್ಲ. ಅರ್ಜಿ ಸಲ್ಲಿಸಲು ಯಾವುದೇ ನಿಗದಿತ ನಮೂನೆ ಇರುವುದಿಲ್ಲ. ಆದಾಗ್ಯೂ, ಭಾದಿತ ವ್ಯಕ್ತಿಯ ಸಹಿ ಅಥವಾ ಎಡಗೈ ಹೆಬ್ಬೆಟ್ಟಿನ ಗುರುತನ್ನು ಹೊಂದಿರುವ ಅರ್ಜಿಯನ್ನು ಓದಲು ಸಾಧ್ಯವಾಗುವಂತೆ ಖಾಲಿ ಕಾಗದದ ಮೇಲೆ ಸ್ಪಷ್ಟವಾಗಿ ಬರೆದಿರಬೇಕು ಅಥವಾ ಬೆರಳಚ್ಚು ಮಾಡಿರಬೇಕು.

  10. ಅರ್ಜಿಯ ಜೊತೆ ಯಾವ ಯಾವ ದಾಖಲಾತಿಗಳನ್ನು ಲಗತ್ತಿಸಬೇಕು
  11. ಕಾಡು ಮೃಗದ ದಾಳಿಯಿಂದ ಶಾಶ್ವತ ವಿಕಲತೆ ಹೊಂದುವ ಪ್ರಕರಣದಲ್ಲಿ ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರ ಪಡೆಯಲು ಅರ್ಜಿಯ ಜೊತೆ ಲಗತ್ತಿಸಬೇಕಾದ ದಾಖಲಾತಿಗಳೆಂದರೆ : 

    ಕಾಡು ಮೃಗದ ದಾಳಿಯಿಂದ ವ್ಯಕ್ತಿಯು ಶಾಶ್ವತ ವಿಕಲತೆ ಹೊಂದಿದ್ದಾನೆ ಎಂಬುದಕ್ಕೆ ಜಿಲ್ಲಾ ಸರ್ಜನ್/ಜಿಲ್ಲಾ ವೈದ್ಯಾಧಿಕಾರಿ/ಜಿಲ್ಲಾ ಮಟ್ಟದ ವೈದ್ಯಕೀಯ ಮಂಡಳಿಯಿಂದ ವೈದ್ಯಕೀಯ ಪ್ರಮಾಣಪತ್ರ.

  12. ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರ ಪ್ರತಿಪಾದಿಸಲು ಯಾರಿಗೆ ಅರ್ಜಿ ಸಲ್ಲಿಸಬೇಕು
  13. ಅರ್ಜಿಯನ್ನು ಸಂಬಂಧಪಟ್ಟ ವಲಯ ಅರಣ್ಯಾಧಿಕಾರಿಗೆ ಸಲ್ಲಿಸಬೇಕು.

  14. ಶಾಶ್ವತ ವಿಕಲತೆ ಹೊಂದುವ ಪ್ರಕರಣದಲ್ಲಿ ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರ ಮಂಜೂರು ಮಾಡಲು ಯಾರಿಗೆ ಅಧಿಕಾರ ನೀಡಲಾಗಿದೆ
  15. ಶಾಶ್ವತ ವಿಕಲತೆ ಹೊಂದುವ ಪ್ರಕರಣದಲ್ಲಿ ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರ ಮಂಜೂರು ಮಾಡಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ವನ್ಯಜೀವಿ) ಹಾಗೂ ಮುಖ್ಯ ವನ್ಯಜೀವಿ ವಾರ್ಡನ್, ಕರ್ನಾಟಕ ಇವರಿಗೆ ಅಧಿಕಾರ ನೀಡಲಾಗಿದೆ.

  16. ಕೃಪಾಧನ (ಎಕ್ಸ್-ಗ್ರೇಷಿಯಾ) ಪರಿಹಾರ ನೀಡುವಲ್ಲಿ ವಿಳಂಬವೇಕೆ
ಕೆಲವು ಸಂದರ್ಭಗಳಲ್ಲಿ ಆ ಉದ್ದೇಶಕ್ಕಾಗಿ ಸಾಕಷ್ಟು ನಿಧಿಯ ಅಲಭ್ಯತೆಯ ಕಾರಣದಿಂದಾಗಿ ವಿಳಂಬವಾಗುತ್ತದೆ. ಕೆಲವು ಸಂದರ್ಭಗಳಲ್ಲಿ ವೈದ್ಯಕೀಯ ಮಂಡಳಿಯಿಂದ ವೈದ್ಯಕೀಯ ಪ್ರಮಾಣಪತ್ರ ಪಡೆಯುವಂತಹ ಪ್ರಕ್ರಿಯಾ ಕಾರಣಗಳಿಂದಾಗಿ ಸಹ ವಿಳಂಬವಾಗುತ್ತದೆ.

ಕೊನೆಯ ಮಾರ್ಪಾಟು : 10/16/2019



© C–DAC.All content appearing on the vikaspedia portal is through collaborative effort of vikaspedia and its partners.We encourage you to use and share the content in a respectful and fair manner. Please leave all source links intact and adhere to applicable copyright and intellectual property guidelines and laws.
English to Hindi Transliterate