ರೈತರಿಗಾಗಿ ಪರಿಹಾರಗಳು ಯೋಜನೆಗಳು:- ಪ್ರಕೃತಿ ವಿಕೋಪ ಮತ್ತು ಕೃಷಿ ಉತ್ಪನ್ನಗಳಿಗೆ ಸರಿಯಾದ ಬೆಲೆ ದೊರೆಯದೆ ನಷ್ಟ ಅನುಭವಿಸಿ ಸರ್ಕಾರಿ ಸ್ವಾಮ್ಯದ ಅಥವಾ ಮಾನ್ಯತೆ ಪಡೆದ ಸಾಲ ನೀಡಿದ ಸಂಸ್ಥೆಗಳಿಂದ ಪಡೆದ ಸಾಲವನ್ನು ತಿರಿಸಲಾಗದೆ ರೈತ ಆತ್ಮಹತ್ಯೆ ಮಾಡಿಕೊಂಡರೆ ಮೃತನ ಕುಟುಂಬಕ್ಕೆ ರೂ. 1,00,000 ಸಹಯ ಧನ ಒದಗಿಸಲಾಗುವುದು. ಕೃಷಿ ಸಂಬಂಧಿತ ಕೆಲಸ ಮಾಡುವಾಗ ಆಕಸ್ಮಿಕಗಳಿಂದ ಮರಣ ಹೊಂದಿದ ರೈತರು ಹಾಗೂ ಕೃಷಿ ಕಾರ್ಮಿಕರ ಕುಟುಂಬಕ್ಕೆ ರೂ. 1,00,000 ಬೆಂಕಿ ಆಕಸ್ಮಿಕಗಳಿಂದ ಹುಲ್ಲು ಮೆದೆ/ಬಣವೆಗಳ ನಷ್ಠವದಲ್ಲಿ ರೂ.10,000 ಇತರೆ ಸೌಲಭ್ಯಗಳು:- ಬಡ್ಡಿರಹಿತ ಬೆಳೆ ಸಾಲ ಯೋಜನೆ ರಾಷ್ಟ್ರೀಯ ಕೃಷಿ ವಿಮಾ ಯೋಜನೆ ಜಿಲ್ಲಾ ವಲಯ ಸಾವಯವ ಗೊಬ್ಬರಗಳ ಯೋಜನೆ. ಜಿಲ್ಲಾ ಕೃಷಿ ತರಬೇತಿ ಕೆಂದ್ರಗಳು ಕೃಷಿ ಪ್ರಶಸ್ತಿ ಯೋಜನೆ: ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದ ಯೋಜನೆಗಳು ಭೂ ಚೇತನ ಯೋಜನೆ ಅಡಿ ಮಣ್ಣು ಪರೀಕ್ಷೆ ಮತ್ತು ಪೋಷಕಾಂಶ, ಮಳೆ ನೀರು ನಿರ್ವಹಣೆ, ಸುಧಾರಿತ ತಳಿಗಳು, ತಾಂತ್ರೀಕತೆ ಇತ್ಯಾದಿಗಳ ಮಾಹಿತಿ ಮತ್ತು ತರಬೇತಿ ತೋಟಗಾರಿಕೆ ಬೆಳೆಗಳಿಗೆ ಪ್ರೋತ್ಸಾಹ ಧನ ರೈತರ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಹೆಚ್ಚಿನ ಸಂಪರ್ಕಕ್ಕಾಗಿ ಕೃಷಿ ಇಲಾಖೆಯ ತಾಲ್ಲೂಕು ಮತ್ತು ಜಿಲ್ಲಾ ಕಛೇರಿಗಳಿಗೆ ಸಂಪರ್ಕಿಸುವುದು. ಮೂಲ : ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ