ಅನುಷ್ಟಾನ ಕಾರ್ಯತಂತ್ರ
ರಾಜ್ಯ ಮಟ್ಟದಲ್ಲಿ :
ಸಂಜೀವಿನಿ ಯೋಜನಾ ತಂಡಕ್ಕೆ ರಾಜೀವ್ ಗಾಂಧಿ ಚೈತನ್ಯ ಯೋಜನೆ ಬಗ್ಗೆ ಒಂದು ದಿನದ ಪರಿಚಯಾತ್ಮಕ ಕಾರ್ಯಗಾರ ಏರ್ಪಡಿಸಲಾಗುವುದು.
ಕಾರ್ಯಾಗಾರದಲ್ಲಿ ವಿವಿಧ ಇಲಾಖೆಗಳು ಮತ್ತು ಭಾಗೀದಾರರ ಪಾತ್ರದ ಬಗ್ಗೆ ಮಾಹಿತಿ ನೀಡುವುದು. ಅನುಷ್ಟಾನದ ಹಂತದಲ್ಲಿ ಎದುರಾಗಬಹುದಾದ ಸಮಸ್ಯೆ / ಸವಾಲುಗಳ ಬಗ್ಗೆ ಅರಿವು ಮೂಡಿಸಲಾಗುವುದು.
ಗ್ರಾಮೀಣಾಭಿವೃಧ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯು ರಾಜ್ಯ ಮಟ್ಟದ ಬ್ಯಾಂಕರುಗಳ ಉನ್ನತ ಸಮಿತಿಯ ಸಭೆ ಕರೆದು ರಾಜೀವ್ ಗಾಂಧಿ ಚೈತನ್ಯ ಯೋಜನೆಯಡಿಯಲ್ಲಿ ಸ್ವಂತ ಉದ್ಯಮ ಸೇವಾ/ವ್ಯಾಪಾರ ಸ್ಥಾಪಿಸಲು ಆಸಕ್ತ ಯುವಜನತೆಗೆ ಸಾಲ ಸೌಲಭ್ಯ ಒದಗಿಸಲು ಒಪ್ಪಿಗೆ ಪಡೆಯಲಾಗುವುದು.
ಬ್ಯಾಂಕುಗಳು ನಿರ್ದಿಷ್ಟ ಸೂಚನೆಗಳನ್ನು ತಮ್ಮ ಬ್ಯಾಂಕಿನ ವಿಭಾಗಿಂiÀi / ಶಾಖಾ ಕಛೇರಿಗಳಿಗೆ ನೀಡುವಂತೆ ಕ್ರಮವಹಿಸಲಾಗುವುದು.
ಜಿಲ್ಲಾ ಮಟ್ಟದಲ್ಲಿ :
ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ರಾಜೀವ್ ಗಾಂಧಿ ಚೈತನ್ಯ ಯೋಜನೆ ಬಗ್ಗೆ ಪರಿಚಯಾತ್ಮಕ ಕಾರ್ಯಾಗಾರವನ್ನು ಏರ್ಪಡಿಸುವುದು.
ಕಾರ್ಯಗಾರದಲ್ಲಿ ಕಾರ್ಯಕ್ರಮದ ಪರಿಕಲ್ಪನೆ ಮತ್ತು ಅನುಷ್ಠಾನದ ಬಗ್ಗೆ ಮಾಹಿತಿ ಒದಗಿಸುವುದು.
ಚರ್ಚೆಗಳ ಮೂಲಕ ಅನುಷ್ಟಾನದ ಹಂತದಲ್ಲಿ ಎದುರಾಗಬಹುದಾದ ಸವಾಲುಗಳಿಗೆ ಸೂಕ್ತ ಪರಿಹಾರೋಪಾಯದ ಮಾಹಿತಿ ನೀಡುವುದು.
ಮೂಲ: ಅರ್.ಜಿ.ಸಿ.ವೈ
ಕೊನೆಯ ಮಾರ್ಪಾಟು : 7/9/2020