2015-16ನೇ ಸಾಲಿನಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಸರಳವಾಗಿ ಮಾದುವೆ ಮಾಡಿಕೊಳ್ಳುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ದಂಪತಿಗಳ ಸರಳ ವಿವಾಹ ಯೋಜನೆಯಡಿ ಒಂದು ಬಾರಿಗೆ ರೂ. 50,000/- ಆರ್ಥಿಕ ನೆರವನ್ನು ನೀಡಲು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಸರ್ಕಾರದ ಮಂಜುರಾತಿ ನೀಡಿದೆ.
- ಅರ್ಜಿದಾರ ದಂಪತಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.
- ಸಾಮೂಹಿಕ ವಿವಾಹದಲ್ಲಿ ಕನಿಷ್ಠ 10 ಜೋಡಿಗಳು ಭಾಗವಹಿಸಿರತಕ್ಕದ್ದು.
- ಈ ಸೌಲಭ್ಯ ಪಡೆಯುವ ವಧುವಿನ ಕನಿಷ್ಠ 18 ವರ್ಷದಿಂದ ಗರಿಷ್ಟ 42 ವರ್ಷಗಳು, ವರನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಟ 45 ವರ್ಷ ವಯಸ್ಸು ಆಗಿರತಕ್ಕದ್ದು.
- ಈ ಯೋಜನೆಯಡಿ ಧನ ಸಹಾಯ ಪಡೆಯಲು ವಧು ಮತ್ತು ವರನ ಒಟ್ಟಾರೆ ವಾರ್ಷಿಕ ಆದಾಯವು ರೂ. 2.00 ಲಕ್ಷಗಳನ್ನು ಮೀರತಕ್ಕದ್ದಲ್ಲ.
- ಈ ಸೌಲಭ್ಯವನ್ನು ಜೀವನದಲ್ಲಿ ಒಮ್ಮೆ ಮಾತ್ರ ಪಡೆಯಬಹುದಾಗಿದೆ.
- ಜಿಲ್ಲಾ ನೋಂದಣಿ ಕಛೇರಿಯಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟ್ ಗಳು, ಸಂಘಗಳು, ಸೊಸೈಟಿಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದಲ್ಲಿ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
- ಸದರಿ ಸಂಸ್ಥೆಗಳು ಆಯೋಜಿಸಿರುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾಗಿರುವ ಬಗ್ಗೆ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು.
- ಪ್ರೋತ್ಸಾಹ ಧನ ಪಡೆಯಲು ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸರಳ ವಿವಾಹವಾದ ೩ ತಿಂಗಳೊಳಗಾಗಿ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳ ಕಛೇರಿಗೆ ಜಂಟಿಯಾಗಿ ನಿಗದಿತ ನಮೂನೆಯಲ್ಲಿ ಮತ್ತು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸತಕ್ಕದ್ದು.
- ವಧು-ವರನು ವಿವಾಹವಾದ ಬಳಿಕ ವಾಸ್ತವ್ಯವಿರುವ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸತಕ್ಕದ್ದು.
- ಸಾಮೂಹಿಕ ವಿವಾಹ ಕಾರ್ಯಕ್ರಮದ ಫೋಟೋ ಹಾಗೂ ವಧು-ವರನ ಜಂಟಿ ಭಾವಚಿತ್ರಗಳನ್ನು (ಸ್ಥಿರ ಚಿತ್ರಗಳನ್ನು) ಆಯೋಜಕರಿಂದ ಪಡೆದು ಅರ್ಜಿಯೊಂದಿಗೆ ಲಗತ್ತಿಸುವುದು.
- ಅರ್ಜಿಗಳನ್ನು ಪರಿಶೀಲಿಸುತ್ತಿರುವ/ಪರಿಶೀಲಿಸಿದ ಅಧಿಕಾರಿಗಳ/ಪ್ರಾಧಿಕಾರಿಗಳ ಮೇಲೆ ಯಾವುದೇ ರೀತಿಯ ಒತ್ತಡವನ್ನು ತಂದಲ್ಲಿ ಅರ್ಜಿಗಳನ್ನು ಯಾವುದೇ ಕಾರಣ ನೀಡದೆ ತಿರಸ್ಕರಿಸಲಾಗುವುದು.
- ಅಂತರ ಜಾತಿ ವಿವಾಹಗಳು ಇದ್ದಲ್ಲಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮದಡಿ ಅಂತರ್ ಜಾತಿ ಪ್ರೋತ್ಸಹಧನಕ್ಕೋಸ್ಕರ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅಂತರ್ ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯಲ್ಲಿ ಅರ್ಜಿ ಸಲ್ಲಿಸಬಹುದು.
- ಮಂಜೂರಾದ ಪ್ರೋತ್ಸಾಹಧನದ ಹಣವನ್ನು ವಧು ಹಾಗೂ ವರನಿಗೆ ಜಂಟಿಯಾಗಿ ಮಂಜೂರು ಮಾಡಲಾಗುವುದು ಹಾಗೂ ಮಂಜೂರಾದ ಮೊತ್ತವನ್ನು ವದ್ಗು ಮತ್ತು ವರನ ಹೆಸರಿನಲ್ಲಿರುವ ಜಂಟಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
- ಇಂತಹ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಯಾವುದೇ ತರಹದ ಬಾಲ್ಯ ವಿವಾಹ ಅಥವಾ ಅಪ್ರಾಪ್ತ ವಯಸ್ಸಿನ ವಿವಾಹಗಳು ಜರುಗದಿರುವಂತೆ ಖಾತ್ರಿಪಡಿಸಿಕೊಳ್ಳುವ ಹಾಗೂ ಶಿಶು ಅಭಿವರ್ಧಿ ಯೋಜನಾಧಿಕಾರಿ (CDPO) ರವರನ್ನು ಈ ಪ್ರಕ್ರಿಯೆಯ ಭಾಗವನ್ನಾಗಿಸತಕ್ಕದ್ದು. ವಿಧಾನಸಭಾ ಕ್ಷೇತ್ರವಾರು ನಿಗಧಿಪಡಿಸುವ ಭೌತಿಕ ಗುರಿಗೆ ಅನುಗುಣವಾಗಿ ಆರ್ಥಿಕ ನೆರವನ್ನು ಮಂಜೂರು ಮಾಡಲಾಗುವುದು.
ಮೂಲ : ಸಮಾಜ ಕಲ್ಯಾಣ ಇಲಾಖೆ,ಮಂಗಳೂರು
ಕೊನೆಯ ಮಾರ್ಪಾಟು : 6/6/2020
0 ರೇಟಿಂಗ್ಗಳು ಮತ್ತು 0 ಕಾಮೆಂಟ್ಗಳು
ಸ್ಟಾರ್ಗಳನ್ನು ಜಾರಿಸಿ ನಂತರ ಕ್ಲಿಕ್ ಮಾಡಿ
© C–DAC.All content appearing on the vikaspedia portal is through collaborative effort of vikaspedia and its partners.We encourage you to use and share the content in a respectful and fair manner. Please leave all source links intact and adhere to applicable copyright and intellectual property guidelines and laws.